ತುಮಕೂರು: ಊರ್ಡಿಗೆರೆಯಿಂದ ಸೋಮವಾರ ಬೆಳಿಗ್ಗೆ ತುಮಕೂರಿನ ವಿದ್ಯಾ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವಾಹನದಲ್ಲಿ ತಾಂತ್ರಿಕ ದೋಷ ಉಂಟಾಗಿ ವಾಹನದಲ್ಲಿ ಹೊಗೆ ತುಂಬಿಕೊಂಡಿತು. ಈ ಹೊಗೆ ಸೇವಿಸಿ 12 ಮಕ್ಕಳು ಅಸ್ವಸ್ಥರಾದರು.
ಜನಪನಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ವಿನಾಯಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು ಶಾಲೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.