ADVERTISEMENT

ಶಿರಾ ಎಪಿಎಂಸಿ: ಜೆಡಿಎಸ್– ಬಿಜೆಪಿ ಮೈತ್ರಿ

ಅಧ್ಯಕ್ಷರಾಗಿ ಚಂದ್ರೇಗೌಡ, ಉಪಾಧ್ಯಕ್ಷರಾಗಿ ಕೆ.ಸಿ.ರಾಮರಾಜು ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 7:43 IST
Last Updated 1 ಜುಲೈ 2020, 7:43 IST
ಶಿರಾ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೆ.ಸಿ.ರಾಮರಾಜು ಅವರನ್ನು ನಿರ್ದೇಶಕರು, ಜೆಡಿಎಸ್, ಬಿಜೆಪಿ ಮುಖಂಡರು, ಅಭಿಮಾನಿಗಳು ಅಭಿನಂದಿಸಿದರು
ಶಿರಾ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೆ.ಸಿ.ರಾಮರಾಜು ಅವರನ್ನು ನಿರ್ದೇಶಕರು, ಜೆಡಿಎಸ್, ಬಿಜೆಪಿ ಮುಖಂಡರು, ಅಭಿಮಾನಿಗಳು ಅಭಿನಂದಿಸಿದರು   

ಶಿರಾ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ಸಿ.ರಾಮರಾಜು ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಅನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದವು.

ಎಪಿಎಂಸಿಯಲ್ಲಿ 7 ಮಂದಿ ಕಾಂಗ್ರೆಸ್ ಬೆಂಬಲಿತರು, 5 ಮಂದಿ ಜೆಡಿಎಸ್ ಬೆಂಬಲಿತ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು. ಸರ್ಕಾರ 3 ಮಂದಿ ನಾಮ ನಿರ್ದೇಶನ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತರ ಬಲ 4ಕ್ಕೆ ಏರಿಕೆಯಾಗಿತ್ತು.

ADVERTISEMENT

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಚಂದ್ರೇಗೌಡ (ಮದಲೂರು ಕ್ಷೇತ್ರ) ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸಿದ್ದಪ್ಪ (ಬರಗೂರು ಕ್ಷೇತ್ರ) ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ಸಿ.ರಾಮರಾಜು (ಕಳ್ಳಂಬೆಳ್ಳ ಕ್ಷೇತ್ರ) ಹಾಗೂಕಾಂಗ್ರೆಸ್ ಬೆಂಬಲಿತ ರಂಗಮ್ಮ (ಬುಕ್ಕಾಪಟ್ಟಣ ಕ್ಷೇತ್ರ) ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಯಲ್ಲಿ ಜಿ.ಚಂದ್ರೇಗೌಡ ಅವರಿಗೆ 9 ಮತಗಳು, ಸಿದ್ದಪ್ಪ ಅವರಿಗೆ 6 ಮತಗಳು ಬಂದರೆ ಒಂದು ಮತ ತಿರಸ್ಕೃತ ಗೊಂಡಿತು.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಸಿ.ರಾಮರಾಜು ಅವರಿಗೆ 9 ಮತಗಳು ಹಾಗೂ ರಂಗಮ್ಮ ಅವರಿಗೆ 7 ಮತಗಳು ಬಂದವು.

ಅತಿ ಹೆಚ್ಚು ಮತ ಪಡೆದ ಜಿ.ಚಂದ್ರೇಗೌಡ ಅವರನ್ನು ಅಧ್ಯಕ್ಷರು ಎಂದು ಹಾಗೂ ಕೆ.ಸಿ.ರಾಮರಾಜು ಅವರನ್ನು ಉಪಾಧ್ಯಕ್ಷರು ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ನಾಹಿದಾ ಜಮ್ ಜಮ್ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.