ADVERTISEMENT

ಶಿವಕುಮಾರ ಸ್ವಾಮೀಜಿ  ಭಾವಚಿತ್ರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 4:13 IST
Last Updated 21 ಜನವರಿ 2021, 4:13 IST
ಶಿವಕುಮಾರ ಸ್ವಾಮೀಜಿ  ಭಾವಚಿತ್ರ ಮೆರವಣಿಗೆ
ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ   

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಸ್ವಾಮೀಜಿ ಅವರ ಭಾವಚಿತ್ರವನ್ನು ಸಣ್ಣ ರಥದಲ್ಲಿ ಇರಿಸಿ ವಸ್ತುಪ್ರದರ್ಶನ ಸ್ಥಳದವರೆಗೆ ಮೆರವಣಿಗೆ ಮಾಡಲಾಗುತ್ತದೆ.

ವೀರಗಾಸೆ, ನಂದಿಧ್ವಜ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಕಲಾವಿದರು ಮೆರವಣಿಗೆಯನ್ನು ಕಳೆಗಟ್ಟಿಸಿದ್ದಾರೆ.

ADVERTISEMENT

ವಸ್ತುಪ್ರದರ್ಶನ ಸ್ಥಳದವರೆಗೆ ಬಂದು ವಾಪಸ್ ಆಗುವ ರಥವನ್ನು ಮಠದ ಆವರಣದಲ್ಲಿ ನಿಲ್ಲಿಸಲಾಗುತ್ತದೆ.

ಕಳೆದ ವರ್ಷದ ಪುಣ್ಯಸ್ಮರಣೆ ವೇಳೆ ಮೆರವಣಿಗೆ ಮುಗಿದ ನಂತರ ಮಠದ ಆವರಣದಲ್ಲಿ ನಿಂತ ರಥವು ಸೆಲ್ಫಿ ಪ್ರಿಯರ ತಾಣವೂ ಆಗಿತ್ತು. ಈ ರಥಕ್ಕೆ ನಮಿಸುತ್ತಿದ್ದ ಬಹುತೇಕ ಭಕ್ತರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.