ಮಧುಗಿರಿ: ಪಟ್ಟಣದ ಲಿಂಗೇನಹಳ್ಳಿಯಲ್ಲಿರುವ ಕೆಆರ್ಐಡಿಎಲ್ ಇಲಾಖೆಯ ಕಚೇರಿಯಲ್ಲಿ ಸೋಮವಾರ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕಡತಗಳು ಬೆಂಕಿಗಾಹುತಿಯಾಗಿವೆ.
ಬೆಳಗ್ಗೆ ಇಲಾಖೆಯ ಪಕ್ಕದಲ್ಲಿರುವ ಹೋಟೆಲ್ ಮಾಲೀಕರು ಕಚೇರಿಯ ಒಳಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಧಿಕಾರಿಗಳು ಬರುವ ವೇಳೆಗೆ ಕಚೇರಿಯಲ್ಲಿದ್ದ ಸುಮಾರು ಕಡತಗಳು ಸುಟ್ಟು ಹೋಗಿವೆ. ಈ ಬಗ್ಗೆ ಇಲಾಖೆಯ ಎಇಇ ಸಿಂಧೂ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.