ADVERTISEMENT

ಸಿದ್ಧಗಂಗಾ ಸ್ವಾಮೀಜಿ ಜನ್ಮದಿನಾಚರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 11:16 IST
Last Updated 14 ಮಾರ್ಚ್ 2020, 11:16 IST

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠದಲ್ಲಿ ಏ. 5ರಂದು ನಡೆಯಬೇಕಿದ್ದ ಶಿವಕುಮಾರ ಸ್ವಾಮೀಜಿ 113ನೇ ಜನ್ಮದಿನದ ಕಾರ್ಯಕ್ರಮವನ್ನು ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಮಠಕ್ಕೆ ಭೇಟಿ ನೀಡುತ್ತಿರುವ ಭಕ್ತರು ಹಾಗೂ ಸಾರ್ವಜನಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ವಾರ್ಷಿಕ ಪರೀಕ್ಷೆಗಳು ಪೂರ್ಣವಾದ ವಿದ್ಯಾರ್ಥಿಗಳನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಲು ಮಠದ ಆಡಳಿತ ಮಂಡಳಿ ಮುಂದಾಗಿದೆ.

7ನೇ ಮತ್ತು 10ನೇ ತರಗತಿ ಮಕ್ಕಳನ್ನು ಹೊರತುಪಡಿಸಿ ಪರೀಕ್ಷೆ ಪೂರ್ಣಗೊಂಡಿರುವ ಮಕ್ಕಳನ್ನು ಅವರ ಊರುಗಳಿಗೆ ಕಳುಹಿಸಲಾಗುವುದು’ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಾಗ್ಗೆ ಮಠಕ್ಕೆ ಭೇಟಿ ನೀಡುತ್ತಿದ್ದು ನಿಗಾ ಇಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.