ADVERTISEMENT

ಸಿದ್ಧಗಂಗಾ ಮಠದ ದ್ವಾರದಲ್ಲಿ ಸ್ಯಾನಿಟರಿ ಸುರಂಗ ಮಾರ್ಗ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 16:53 IST
Last Updated 15 ಜೂನ್ 2020, 16:53 IST
ಸ್ಯಾನಿಟೈಸ್ ಘಟಕವನ್ನು ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸಿದರು
ಸ್ಯಾನಿಟೈಸ್ ಘಟಕವನ್ನು ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸಿದರು   

ತುಮಕೂರು: ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಮಠದಲ್ಲಿ ಕಲ್ಪಶುದ್ಧಿ ಸ್ಯಾನಿಟರಿ ಸುರಂಗ ಮಾರ್ಗ ಸ್ಥಾಪಿಸಲಾಗಿದೆ. ಸೋಮವಾರ ಸಿದ್ಧಲಿಂಗ ಸ್ವಾಮೀಜಿ ಘಟಕ ಉದ್ಘಾಟಿಸಿದರು.

ಕ್ಯಾತ್ಸಂದ್ರದಿಂದ ಮಠಕ್ಕೆ ಪ್ರವೇಶ ಪಡೆಯುವ ವಸ್ತುಪ್ರದರ್ಶನದ ಮುಂಭಾಗದ ಗೇಟ್ ಬಳಿ ಈ ಘಟಕ ಸ್ಥಾಪಿಸಲಾಗಿದೆ. ಸಂಜೀವಿನಿ ರಕ್ತನಿಧಿ ಕೇಂದ್ರದ ಅರುಣ್‍ಕುಮಾರ್ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಎಸ್‍ಐಟಿ ಕಾಲೇಜು ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಚಿದಾನಂದ್ ಈ ಘಟಕ ರೂಪಿಸಿದ್ದಾರೆ.

ಸಿದ್ಧಲಿಂಗ ಸ್ವಾಮೀಜಿ, ‘ಇಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಹೀಗಾಗಿ ಮಠಕ್ಕೆ ಬರುವ ಭಕ್ತರಿಗೆ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಕುವ ಅವಶ್ಯಕತೆ ಇಲ್ಲ. ಗೇಟ್‍ನಲ್ಲೆ ಥರ್ಮಲ್ ಸ್ಕ್ಯಾನಿಂಗ್ ಸಹ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

ಎಸ್‍ಐಟಿ ಕಾಲೇಜು ಸಿಇಒ ಡಾ.ಶಿವಕುಮಾರಯ್ಯ, ಎಸ್‍ಐಟಿ ನಿರ್ದೇಶಕ ಎಂ.ಎನ್.ಚನ್ನಬಸಪ್ಪ, ಪ್ರಾಂಶುಪಾಲ ಶಿವಾನಂದ್, ಪುನೀತ್, ಅರುಣ್‍ಕುಮಾರ್, ಚಿದಾನಂದ್, ಸುರೇಶ್, ಗೌರಿಶಂಕರ್, ಲೋಹಿತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.