ತುಮಕೂರು: ಸಿದ್ಧಗಂಗಾ ಮಠದ ದನದ ಕೊಟ್ಟಿಗೆಗೆ ಬುಧವಾರ ರಾತ್ರಿ ಚಿರತೆ ನುಗ್ಗಿದ್ದು ಎರಡು ಜಾನುವಾರು ಬಲಿ ತೆಗೆದುಕೊಂಡಿದೆ. ಇದರಲ್ಲಿ ಒಂದು ಕರು ಸಹ ಸೇರಿದೆ.
ಮಠದ ಸಮೀಪದ ಬೆಟ್ಟಗುಡ್ಡಗಳಿಂದ ಚಿರತೆ ಬಂದಿದೆ. ಜಾನುವಾರುಗಳ ವರ್ತನೆ ಕಂಡು ಸ್ಥಳಕ್ಕೆ ಮಠದ ಸಿಬ್ಬಂದಿ ದೌಡಾಯಿಸಿದ್ದಾರೆ. ಸಿಬ್ಬಂದಿಯನ್ನು ಕಂಡ ತಕ್ಷಣ ಚಿರತೆ ಪರಾರಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದರು. ಚಿರತೆ ಸೆರೆಗೆ ಮಠದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.