ADVERTISEMENT

ದಾಸೋಹದಲ್ಲಿ ಸಿದ್ಧಗಂಗಾ ಮಠ​​​​​​​ ವಿಶ್ವ ದಾಖಲೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 11:30 IST
Last Updated 21 ಜನವರಿ 2023, 11:30 IST
   

ತುಮಕೂರು: ಶಿವಕುಮಾರ ಸ್ವಾಮೀಜಿ ಸ್ಮರಣಾರ್ಥ ಜ. 21ರಂದು ರಾಜ್ಯದಲ್ಲಿ ಸರ್ಕಾರದ ವತಿಯಿಂದ ದಾಸೋಹ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಂದಿನ ದಿನಗಳಲ್ಲಿ ದಾಸೋಹ ದಿನವನ್ನು ಮಠಮಾನ್ಯಗಳಲ್ಲಿ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಲಾಗುವುದು. ವಿಶ್ವ ದಾಖಲೆ ಮಾಡುವಂತಹ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾಮೀಜಿ ಹುಟ್ಟೂರು ಮಾಗಡಿ ತಾಲ್ಲೂಕು ವೀರಾಪುರದಲ್ಲಿ ಸ್ವಾಮೀಜಿ ಪ್ರತಿಮೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು. ದಾಸೋಹ ದಿನವಾದ ಜ. 21ರಂದು ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.