ADVERTISEMENT

ಗೊರವನಹಳ್ಳಿಯಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 6:52 IST
Last Updated 31 ಮಾರ್ಚ್ 2023, 6:52 IST
ಕೊರಟಗೆರೆ ಪಟ್ಟಣದ ದೇವಾಲಯದಲ್ಲಿ ಶ್ರೀರಾಮ ನವಮಿ ಹಬ್ಬದ ಅಂಗವಾಗಿ ಭಕ್ತರಿಗೆ ಮಜ್ಜಿಗೆ ಹಾಗೂ ಪಾನಕ ವಿತರಿಸಲಾಯಿತು
ಕೊರಟಗೆರೆ ಪಟ್ಟಣದ ದೇವಾಲಯದಲ್ಲಿ ಶ್ರೀರಾಮ ನವಮಿ ಹಬ್ಬದ ಅಂಗವಾಗಿ ಭಕ್ತರಿಗೆ ಮಜ್ಜಿಗೆ ಹಾಗೂ ಪಾನಕ ವಿತರಿಸಲಾಯಿತು   

ಕೊರಟಗೆರೆ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿದವು. ಕೋವಿಡ್‌ನಿಂದ ಕಳೆಗುಂದಿದ್ದ ರಾಮ ನವಮಿ ಆಚರಣೆಯು ಈ ವರ್ಷ ಕಳೆಗಟ್ಟಿತ್ತು.

ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಇತರೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳ
ಲಾಗಿತ್ತು.

ಪಟ್ಟಣದ ಗಂಗಾಧರೇಶ್ವರ ದೇವಸ್ಥಾನ, ಕಣ್ಣಪ್ಪ ದೇವಸ್ಥಾನ, ಶನೈಶ್ವರ ದೇವಾಲಯ, ಬೈಲಾಂಜನೇಸ್ವಾಮಿ ದೇಗುಲ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಹಮ್ಮಿಕೊಳ್ಳಲಾಗಿತ್ತು.

ADVERTISEMENT

ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಲ್ಲಾ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗಿನಿಂದಲೇ ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು.

ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಹಬ್ಬದ ಅಂಗವಾಗಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ಭಕ್ತರಿಗಾಗಿ ದೇವಾಲಯದಲ್ಲಿ ಪಾನಕ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕಿನ ಬಹುತೇಕ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಕೆಲವು ದೇವಾಲಯಗಳಲ್ಲಿ ಯುವಕರು ಸಮವಸ್ತ್ರ ಧರಿಸಿ ಪಾನಕ, ಮಜ್ಜಿಗೆ, ಪ್ರಸಾದ ಹಂಚುವಲ್ಲಿ ನಿರತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.