ADVERTISEMENT

19ರಂದು ಕುಣಿಗಲ್‌ನಲ್ಲಿ ವಿಶೇಷ ಸತ್ಸಂಗ

​ಪ್ರಜಾವಾಣಿ ವಾರ್ತೆ
Published 17 ಮೇ 2019, 14:14 IST
Last Updated 17 ಮೇ 2019, 14:14 IST

ತುಮಕೂರು: ನಗರದ ರಾಮಕೃಷ್ಣ-ವಿವೇಕಾನಂದ ಆಶ್ರಮ ಹಾಗೂ ಕುಣಿಗಲ್ಲಿನ ರಾಮಕೃಷ್ಣ ಸತ್ಸಂಗ ಕೇಂದ್ರದ ಆಶ್ರಯದಲ್ಲಿ ಕುಣಿಗಲ್ಲಿನ ಐತಿಹಾಸಿಕ ದೊಡ್ಡಕೆರೆ ಏರಿಯ ಮೇಲಿರುವ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಮೇ 19ರಂದು ಸಂಜೆ 5.30ಕ್ಕೆ ಭಜನೆ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವನ್ನು ಶಾಸಕ ಡಾ.ಎಚ್.ಡಿ.ರಂಗನಾಥ್ ಉದ್ಘಾಟನೆ ಮಾಡುವರು. ತುಮಕೂರಿನ ರಾಮಕೃಷ್ಣ- ವಿವೇಕಾನಂದ ಆಶ್ರಮದ ಆಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಭಗವನ್ನಾಮ ಸಂಕೀರ್ತನೆ ಹಾಗೂ ವಿಶೇಷ ಪ್ರವಚನ ನೀಡುವರು. ಸ್ವಾಮಿ ಧೀರಾನಂದಜೀ ಮಹಾರಾಜ್ ಹಾಗೂ ಸ್ವಾಮಿ ಪರಮಾನಂದ ಓಂ ಅವರು ಪಾಲ್ಗೊಳ್ಳುವರು. ಡಿವೈಎಸ್ಪಿ ರಾಮಲಿಂಗೇಗೌಡ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT