ADVERTISEMENT

ಸಿದ್ಧಗಂಗಾ ಮಠದ ಬಳಿ ಹೊಂಡದಲ್ಲಿ ವಿದ್ಯಾರ್ಥಿ ಶವ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 9:03 IST
Last Updated 18 ಜುಲೈ 2021, 9:03 IST
ಮೃತ ದೇಹ–ಪ್ರಾತಿನಿಧಿಕ ಚಿತ್ರ
ಮೃತ ದೇಹ–ಪ್ರಾತಿನಿಧಿಕ ಚಿತ್ರ   

ತುಮಕೂರು: ಸಿದ್ಧಗಂಗಾ ಮಠದ ಹಿಂಭಾಗದಲ್ಲಿ ಇರುವ ರಾಮದೇವರ ಬೆಟ್ಟದ ಮೇಲಿನ ಹೊಂಡದಲ್ಲಿ ವಿದ್ಯಾರ್ಥಿ ಶವ ಭಾನುವಾರ ಪತ್ತೆಯಾಗಿದೆ.

ಸಿದ್ಧಗಂಗಾ ಮಠದಲ್ಲಿರುವ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಗಗನ್‌ಗೌಡ (16) ಮೃತಪಟ್ಟಿರುವ ಬಾಲಕ. ನೆಲಮಂಗಲ ತಾಲ್ಲೂಕು ಹೆಸರುಘಟ್ಟ ಸಮೀಪದ ಕಾಕೋಳ ಗ್ರಾಮದ ಪ್ರಕಾಶ್ ಎಂಬುವರ ಪುತ್ರನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಠದಲ್ಲೇ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ.

ಜುಲೈ 16ರಿಂದ ತಮ್ಮ ಮಗ ನಾಪತ್ತೆಯಾಗಿದ್ದಾನೆ ಎಂದು ಕ್ಯಾತ್ಸಂದ್ರ ಠಾಣೆಗೆ ತಂದೆ ಪ್ರಕಾಶ್ ಶನಿವಾರ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ್ದರೂ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಭಾನುವಾರ ಬೆಳಿಗ್ಗೆ ಗ್ರಾಮದ ಕೆಲವರು ನೀರಿನ ಹೊಂಡದಲ್ಲಿ ಶವ ಇರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಹಾಗೂ ಪೋಷಕರು ಶವ ಗುರುತಿಸಿದ್ದಾರೆ.

ADVERTISEMENT

ಅನುಮಾನ: ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಎಂಬ ಅನುಮಾನ ಮೃತ ಬಾಲಕನ ಪೋಷಕರನ್ನು ಕಾಡುತ್ತಿದೆ. ಸಾವಿನ ಕಾರಣ ಪತ್ತೆ ಮಾಡುವಲ್ಲಿ ಪೊಲೀಸರು ನಿರತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.