ADVERTISEMENT

ತುಮಕೂರು: ಏ. 1ಕ್ಕೆ ಶಿವಕುಮಾರ ಸ್ವಾಮೀಜಿ ಜಯಂತಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2024, 4:35 IST
Last Updated 30 ಮಾರ್ಚ್ 2024, 4:35 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ತುಮಕೂರು: ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 117ನೇ ಜನ್ಮ ದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಏ. 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.

ಪತಂಜಲಿ ಯೋಗ ಗುರು ಸ್ವಾಮಿ ರಾಮದೇವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗುರುವಂದನಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ರಾಜಕೀಯ ಪಕ್ಷಗಳ ಮುಖಂಡರು, ಇತರೆ ಪ್ರಮುಖರನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯಾರೇ ಬಂದರೂ ಭಕ್ತರಾಗಿ ಭಾಗವಹಿಸಬಹುದು ಎಂದು ಅವರು ಅವರು ಹೇಳಿದರು.

ADVERTISEMENT

ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಂಡರಗಿ ಅನ್ನದಾನೇಶ್ವರ ಮಠದ ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಗದಗ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯ ಅಜ್ಜ, ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶಿವಸಿದ್ಧೇಶ್ವರ ಸ್ವಾಮೀಜಿ ಭಾಗವಹಿಸುವರು ಎಂದರು.

ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ, ಶಿವಕುಮಾರಯ್ಯ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ದಾಸೋಹ: ಸೋಮವಾರ ಇಡೀ ದಿನ ಮಠದಲ್ಲಿ ದಾಸೋಹ ನಡೆಯಲಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನದಿಂದ ರಾತ್ರಿ ವರೆಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸಿಹಿ ಬೂಂದಿ ತಯಾರಿಕೆ ಕಾರ್ಯ ನಡೆಯುತ್ತಿದೆ.

ತುಮಕೂರು ಸಿದ್ಧಗಂಗಾ ಮಠದಲ್ಲಿ ಸಿಹಿ ಬೂಂದಿ ತಯಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.