ADVERTISEMENT

ನಾಳೆಯಿಂದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 15:36 IST
Last Updated 26 ಫೆಬ್ರುವರಿ 2020, 15:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಚಕ್ರವರ್ತಿ ಗೆಳೆಯರ ಬಳಗದಿಂದ ರಾಜ್ಯಮಟ್ಟದ 7ನೇಹೊನಲು ಬೆಳಕಿನ ಟೆನ್ನಿಸ್ ಬಾಲ್‌ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.28 ರಿಂದ ಮಾರ್ಚ್‌ 1ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮುಖಂಡ ಪಿ.ಎನ್.ಕೃಷ್ಣಮೂರ್ತಿ ತಿಳಿಸಿದರು.

ಪಂದ್ಯಾವಳಿಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡುವರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಶ್ರೀನಿವಾಸ್, ಕೆ.ಎನ್.ರಾಜಣ್ಣ, ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಜಯಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎರಡನೇ ದಿನದ ಪಂದ್ಯಾವಳಿಗೆ ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ಹಾಗೂ ಮೂರನೇ ದಿನದ ಪಂದ್ಯಾವಳಿಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟಿಗ ಅಜರುದ್ದೀನ್, ದೊಡ್ಡಗಣೇಶ್, ಮೇಯರ್ ಫರೀದಾಬೇಗಂ, ಆಯುಕ್ತ ಭೂಬಾಲನ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ADVERTISEMENT

ಮುಖಂಡ ಧನಿಯಾಕುಮಾರ್, ಕ್ರೀಡಾಪಟುಗಳು ಹಾಗೂ ಪೌರಕಾರ್ಮಿಕರು ಸೇರಿದಂತೆ 100 ಮಂದಿಯನ್ನು ಅಭಿನಂದಿಸಲಾಗುವುದು. ಮಾಹಿತಿಗೆ ಮೊಬೈಲ್ 98458 95324, 97421 23433 ಸಂಪರ್ಕಿಸಬಹುದು ಎಂದರು.

ಈಗಾಗಲೇ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳು ನೋಂದಣಿ ಮಾಡಿಕೊಂಡಿವೆ. ಪ್ರಥಮ ಬಹುಮಾನ ₹2.50 ಲಕ್ಷ, ದ್ವಿತೀಯ ₹1.50 ಲಕ್ಷ ಹಾಗೂ ಪ್ರತಿ ಪಂದ್ಯಕ್ಕೆ ಪಂದ್ಯಶ್ರೇಷ್ಟ ಹಾಗೂ ಸರಣಿಯ ಕೊನೆಯಲ್ಲಿ ವಿಶೇಷ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.