ADVERTISEMENT

ಅಕ್ರಮ ಮರಳುಗಾರಿಕೆ ನಿಲ್ಲಿಸುತ್ತೇವೆ: ಸಚಿವ ಸಿ.ಸಿ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 15:18 IST
Last Updated 30 ಆಗಸ್ಟ್ 2019, 15:18 IST
ಸಿ.ಸಿ.ಪಾಟೀಲ್
ಸಿ.ಸಿ.ಪಾಟೀಲ್   

ತುಮಕೂರು: ಅಕ್ರಮ ಮರಳು ಗಣಿಗಾರಿಕೆ ನಿಲ್ಲಿಸುತ್ತೇವೆ. ದಕ್ಷತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಗುರುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಣಿ ಮತ್ತು ಭೂ ವಿಜ್ಞಾನ ಖಾತೆಯಲ್ಲಿ ಏನೇ ನ್ಯೂನ್ಯತೆಗಳಿದ್ದರೂ ಅದನ್ನು ಸರಿಪಡಿಸಿ ಇನ್ನೂ 6 ತಿಂಗಳಲ್ಲಿ ಹಿಂದಿನ ಸರ್ಕಾರಕ್ಕಿಂತ ನಾವು ಉತ್ತಮ ಆಡಳಿತ ನೀಡುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ADVERTISEMENT

ಶಾಸಕರಾದ ಬಳಿಕ ಸಚಿವರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಾರೆ. ನಮ್ಮ ಪಕ್ಷದ ರಾಷ್ಟ್ರೀಯ ವರಿಷ್ಠರ ಮಂಡಳಿಯು ಅದನ್ನು ತೀರ್ಮಾನಿಸುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.