ತುಮಕೂರು: ನಗರದಲ್ಲಿ ಗುರುವಾರ ರಾತ್ರಿ ವಸತಿ ಗೃಹವೊಂದರ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ದೈವಿಕ್ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೈವಿಕ್ ಮುಂಬೈ ನಿವಾಸಿಯಾಗಿದ್ದು, ಬೆಂಗಳೂರಿಗೆ ತೆರಳುವಾಗ ಮಾರ್ಗಮಧ್ಯೆ ನಗರದಲ್ಲಿ ಬಸ್ನಿಂದ ಇಳಿದಿದ್ದಾರೆ. ನಗರದ ಬಟವಾಡಿ ಬಳಿಯ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡು ತಂಗಿದ್ದರು. ರಾತ್ರಿ 10 ಗಂಟೆಯ ಸುಮಾರಿಗೆ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.