ADVERTISEMENT

ಅಪಘಾತ: ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 0:59 IST
Last Updated 29 ಜನವರಿ 2021, 0:59 IST
ವರ್ಷಿತಾ
ವರ್ಷಿತಾ   

ಕೊರಟಗೆರೆ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾಗಮ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಟ್ಟಣದ ಹೊರವಲಯದ ದೊಡ್ಡೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದ ಅಪಘಾತದಲ್ಲಿ ಸಿ‌.ಎನ್ ದುರ್ಗ ಹೋಬಳಿ ಮಾಲಿಂಗನಹಟ್ಟಿ ಗ್ರಾಮದ ನಿವಾಸಿ ಗೋಪಾಲಕೃಷ್ಣ ಅವರ ಪುತ್ರಿ ವರ್ಷಿತಾ (12) ಮೃತಪಟ್ಟಿದ್ದಾಳೆ.

ಪಟ್ಟಣದ ಗೌರಿನಿಲಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವರ್ಷಿತಾ ಬುಧವಾರ ಸಂಜೆ ವಿದ್ಯಾಗಮ ತರಗತಿ ಮುಗಿಸಿಕೊಂಡು ತನ್ನ ತಂದೆ ಗೋಪಾಲಕೃಷ್ಣ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಳು. ತುಮಕೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಮತ್ತು ವರ್ಷಿತಾಳ ತಂದೆ ಚಲಾಯಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ADVERTISEMENT

ಅಪಘಾತದ ರಭಸಕ್ಕೆ ನೆಲಕ್ಕೆ ಬಿದ್ದ ವರ್ಷಿತಾಳ ತಲೆಗೆ ತೀವ್ರವಾದ ಪೆಟ್ಟಾಗಿದ್ದು, ವಿಪರೀತ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಗಂಭೀರವಾಗಿ ಗಾಯಗೊಂಡಿರುವ ಗೋಪಾಲಕೃಷ್ಣ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.