ಕುಣಿಗಲ್: ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಕಾಲುವೆಯ ನೀರಿನ ರಭಸಕ್ಕೆ ವಿದ್ಯಾರ್ಥಿಯೊಬ್ಬ ಕೊಚ್ಚಿ ಹೋಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರು ಮಹಾಲಕ್ಷ್ಮಿ ಬಡಾವಣೆಯ ಸಂಜಯ್ (16) ಮೃತಪಟ್ಟವರು. ಆತ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಸ್ನೇಹಿತೆಯ ರೊಂದಿಗೆ ಚುಂಚನಗಿರಿ, ಯಡೆಯೂರು ಪ್ರವಾಸ ಮುಗಿಸಿ, ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನೋಡಲು ಬಂದಿದ್ದರು. ಕಾಲುವೆಯಲ್ಲಿ ಈಜಲು ಹೋಗಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಶವವು ಒಂದು ಕಿ.ಮೀ. ದೂರದಲ್ಲಿ ಸಿಕ್ಕಿದೆ. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.