ADVERTISEMENT

ಬೈಕ್ ಅಪಘಾತ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬರುತ್ತಿದ್ದ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 6:20 IST
Last Updated 4 ಏಪ್ರಿಲ್ 2022, 6:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬರುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಕುಣಿಗಲ್ ತಾಲ್ಲೂಕು ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಾಲಗೆರೆ ಬಳಿ ಸೋಮವಾರ ನಡೆದಿದೆ.

ನವೀನ್ (15) ಮೃತ ವಿದ್ಯಾರ್ಥಿ. ಶರತ್ ಹಾಗೂ ದರ್ಶನ್ ಗಾಯಗೊಂಡಿದ್ದಾರೆ. ಎಲ್ಲರೂ ಸೆಣಬಘಟ್ಟ ಬಾಬು ರಾಜೇಂದ್ರಪ್ರಸಾದ್ ಶಾಲೆಯ ವಿದ್ಯಾರ್ಥಿಗಳು.

ಅಮೃತೂರಿನ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬೈಕ್‌ನಲ್ಲಿ ಮೂವರು ಒಟ್ಟಿಗೆ ಬರುತ್ತಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.