ADVERTISEMENT

ಆಟೊದಿಂದ ಬಿದ್ದು ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:09 IST
Last Updated 28 ಸೆಪ್ಟೆಂಬರ್ 2022, 5:09 IST

ಮಧುಗಿರಿ: ಶಾಲೆ ಮುಗಿಸಿಕೊಂಡು ಮನೆಗೆ ಆಟೊದಲ್ಲಿ ಹಿಂದಿರುಗುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಲಿಂಗೇನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಬೆಂಕಿಪುರ ನಿವಾಸಿಯಾದ ಗಾರೆ ಅಶ್ವಥಪ್ಪ ಅವರ ಪುತ್ರ ಕುಶಾಲ್ (9) ಮೃತಪಟ್ಟ ವಿದ್ಯಾರ್ಥಿ.

ಪಟ್ಟಣದ ವಿವೇಕಾನಂದ ಶಾಲೆಯ ಎರಡನೇ ತರಗತಿಯಲ್ಲಿ ಕುಶಾಲ್ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿ ಇಳಿಯುವುದಕ್ಕೂ ಮುಂಚೆಯೇ ಆಟೊ ಚಾಲನೆ ಮಾಡಿದ ಪರಿಣಾಮ ಆಯತಪ್ಪಿ ಬಿದ್ದು ಹಿಂದಿನ ಚಕ್ರಕ್ಕೆ ತಲೆ ಸಿಕ್ಕಿ ಹಾಕಿಕೊಂಡು ಮೃತಪಟ್ಟಿದ್ದಾನೆ.

ADVERTISEMENT

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.