ಶಿರಾ: ತಾಲ್ಲೂಕಿನ ತಡಕಲೂರು ಗ್ರಾಮದ ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ (10) ಕೆರೆಯಲ್ಲಿ ಈಜಾಡುವ ಸಮಯದಲ್ಲಿ ನೀರಿನಲ್ಲಿ ಮುಳುಗಿ ಗುರುವಾರ ಸಾವನ್ನಪ್ಪಿದ್ದಾನೆ.
ಸ್ನೇಹಿತರ ಜತೆ ಕೆರೆಯಲ್ಲಿ ಈಜಾಡಲು ಹೋಗಿದ್ದು, ಪ್ರಜ್ವಲ್ ಕಾಣದಾಗಿದ್ದಾನೆ. ಸ್ನೇಹಿತರು ಗಾಬರಿಯಿಂದ ಗ್ರಾಮಕ್ಕೆ ಹಿಂದಿರುಗಿದ್ದಾರೆ. ವಿಷಯ ತಿಳಿದ ಮನೆಯವರು, ಗ್ರಾಮದವರು ಶೋಧ ಕಾರ್ಯ ನಡೆಸಿದಾಗ ಶವ ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.