ADVERTISEMENT

ಕುಣಿಗಲ್‌ಗೆ ರೇಸ್‌ ಕೋರ್ಸ್‌ ಸ್ಥಳಾಂತರಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 20:00 IST
Last Updated 21 ಜನವರಿ 2024, 20:00 IST

ತುಮಕೂರು: ದೇಶದ ಅತ್ಯಂತ ಹಳೆಯ ಹಾಗೂ ಪ್ರತಿಷ್ಠಿತ ಕುಣಿಗಲ್ ಕುದುರೆ ಸಂತಾನೋತ್ಪತ್ತಿ ಕೇಂದ್ರವನ್ನು (ಸ್ಟಡ್ ಫಾರ್ಮ್‌) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನ ಹೃದಯ ಭಾಗದಲ್ಲಿ ಇರುವ ರೇಸ್‌ ಕೋರ್ಸ್‌ ಅನ್ನು ಕುಣಿಗಲ್‌ಗೆ ಸ್ಥಳಾಂತರಿಸುವಂತೆ ಸಲಹೆ ಮಾಡಿದ್ದೇನೆ’ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಕ್ವಿಂಟಲ್‌ಗೆ ₹1,500 ಪ್ರೋತ್ಸಾಹ ಧನ ನೀಡಲಿದೆ ಎಂದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.