ADVERTISEMENT

ಕುಣಿಗಲ್: ಒಕ್ಕಲಿಗರ ಸಂಘಕ್ಕೆ ಕಾಯಕಲ್ಪ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 8:28 IST
Last Updated 14 ನವೆಂಬರ್ 2021, 8:28 IST

ಕುಣಿಗಲ್: ರಾಜ್ಯ ಒಕ್ಕಲಿಗರ ಸಂಘ ಅವ್ಯವಸ್ಥೆಯಿಂದ ಕೂಡಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಕಾಯಕಲ್ಪ ನೀಡಬೇಕಿದೆ ಎಂದು ಮಾಜಿ ಸಚಿವ ಡಿ. ನಾಗರಾಜಯ್ಯಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತುಮಕೂರು ಜಿಲ್ಲೆಯಿಂದ ಇಬ್ಬರು ನಿರ್ದೇಶಕರು ಆಯ್ಕೆಯಾಗಬೇಕಿದೆ. ಡಿ. 12ರಂದು ನಡೆಯುವ ಚುನಾವಣೆಗೆ ಇದೇ 15ರಿಂದ 23ರ ವರೆಗೆ ನಾಮಪತ್ರ ಸಲ್ಲಿಸಬೇಕಿದೆ ಎಂದರು.

ಪ್ರಸಕ್ತ ಸಾಲಿನ ಚುನಾವಣೆಗೆ ತಮ್ಮ ಪುತ್ರ ಬಿ.ಎನ್. ಲೋಕೇಶ್ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಮತ ನೀಡಬೇಕು. ಜಿಲ್ಲೆಯಲ್ಲಿ 33 ಸಾವಿರ ಮತದಾರರಿದ್ದಾರೆ. ಈ ಪೈಕಿ ಕುಣಿಗಲ್ ತಾಲ್ಲೂಕಿನಲ್ಲಿ 11 ಸಾವಿರ ಮತದಾರರಿದ್ದಾರೆ ಎಂದುತಿಳಿಸಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಬಿ.ಎನ್. ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.