ತುಮಕೂರು: ಆಂಧ್ರಪ್ರದೇಶದ ಆದೋನಿಯ ಶಾರದಾ ದತ್ತಪೀಠಂನ ವಿದ್ಯಾಭಿನವ ಸುಬ್ರಹ್ಮಣ್ಯ ಭಾರತೀ ಸ್ವಾಮೀಜಿ ಅವರ 47ನೇ ಚಾತುರ್ಮಾಸ್ಯವು ನಗರದ ಬಿ.ಎಚ್.ರಸ್ತೆಯ ಶೃಂಗೇರಿ ಶಂಕರ ಮಠದಲ್ಲಿ ಆರಂಭಗೊಂಡಿದೆ.
ಸೆ. 2ರ ವರೆಗೆ ಚಾತುರ್ಮಾಸ್ಯ ವ್ರತವನ್ನು ಸ್ವಾಮೀಜಿ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಧಾರ್ಮಿಕ ಪೂಜೆಗಳು, ರುದ್ರಾಭಿಷೇಕ, ಶ್ರೀಚಕ್ರಪೂಜೆ ನಡೆಯಲಿದೆ.
ಎಂಜಿನಿಯರಿಂಗ್ ಪದವಿ ಪಡೆದಿರುವ ಸ್ವಾಮೀಜಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದ್ದಾರೆ. 38ನೇ ವಯಸ್ಸಿನಲ್ಲಿ ಸಂನ್ಯಾಸ ದೀಕ್ಷೆ ಸ್ವೀಕರಿಸಿದ ಅವರು ತಮ್ಮ 47ನೇ ವರ್ಷದ ಚಾತುರ್ಮಾಸ್ಯವನ್ನು ನಗರದಲ್ಲಿ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.