ADVERTISEMENT

ಕೊರಟಗೆರೆ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ತಹಶೀಲ್ದಾರ್‌

​ಪ್ರಜಾವಾಣಿ ವಾರ್ತೆ
Published 17 ಜೂನ್ 2023, 14:33 IST
Last Updated 17 ಜೂನ್ 2023, 14:33 IST
ಅಪಘಾತದಿಂದ ಗಾಯಗೊಂಡಿದ್ದ ಸತ್ಯನಾರಾಯಣ ಅವರನ್ನು ಕೊರಟಗೆರೆ ತಹಶೀಲ್ದಾರ್ ಮುನಿಶಾಮಿರೆಡ್ಡಿ ಆಸ್ಪತ್ರೆಗೆ ದಾಖಲಿಸಿದರು
ಅಪಘಾತದಿಂದ ಗಾಯಗೊಂಡಿದ್ದ ಸತ್ಯನಾರಾಯಣ ಅವರನ್ನು ಕೊರಟಗೆರೆ ತಹಶೀಲ್ದಾರ್ ಮುನಿಶಾಮಿರೆಡ್ಡಿ ಆಸ್ಪತ್ರೆಗೆ ದಾಖಲಿಸಿದರು    

ಕೊರಟಗೆರೆ: ತಾಲ್ಲೂಕಿನ ಜಿ.ನಾಗೇನಹಳ್ಳಿ ಸಮೀಪದ ಗೊಲ್ಲರಹಟ್ಟಿ ಬಳಿ ಶನಿವಾರ ಸತ್ಯನಾರಾಯಣ ಅವರು ಬೈಕ್‌ ಅಪಘಾತದಿಂದ ತೀವ್ರ ಗಾಯಗೊಂಡು ಒದ್ದಾಡುತ್ತಿದ್ದು, ತಹಶೀಲ್ದಾರ್ ಮುನಿಶಾಮಿರೆಡ್ಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅ‍ಪಘಾತವಾಗಿ ನೋವಿನಿಂದ ಒದ್ದಾಡುತ್ತಿದ್ದರೂ ಯಾರೊಬ್ಬರ ಅವರ ನೆರವಿಗೆ ಬಂದಿಲ್ಲ. ಕಾರ್ಯ ನಿಮಿತ್ತ ಅದೇ ರಸ್ತೆಯಲ್ಲಿ ತಹಶೀಲ್ದಾರ್ ಅವರು ತೆರಳುತ್ತಿದ್ದರು. ಗಾಯಾಳುವನ್ನು ತಮ್ಮ ಜೀಪ್‌ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳು ಸತ್ಯನಾರಾಯಣ ತುರುವೇಕೆರೆ ನಿವಾಸಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.