ADVERTISEMENT

ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 9:57 IST
Last Updated 7 ಮಾರ್ಚ್ 2023, 9:57 IST
ಫೋಟೋ 03,ಗುಬ್ಬಿ: ಹಿಂದುಳಿದ ವರ್ಗಗಳ ಸಮಾವೇಶದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು ಹಾಗೂ ಬಂಟಿಂಗ್ಸ್ ಗಳು.
ಫೋಟೋ 03,ಗುಬ್ಬಿ: ಹಿಂದುಳಿದ ವರ್ಗಗಳ ಸಮಾವೇಶದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು ಹಾಗೂ ಬಂಟಿಂಗ್ಸ್ ಗಳು.   

ಗುಬ್ಬಿ: ಮಾರ್ಚ್ 7ರಂದು ಪಟ್ಟಣದಲ್ಲಿ ಬಿಜೆಪಿಯಿಂದ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಪ್ರಾರಂಭವಾಗುವ ಮೆರವಣಿಗೆಯು ಕಲಾ ತಂಡಗಳೊಂದಿಗೆ ಪ್ರಮುಖ ಬೀದಿ ಗಳಲ್ಲಿ ಸಂಚರಿಸಲಿದೆ. ಬಳಿಕ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಸಿದ್ಧಪಡಿಸಿರುವ ವೇದಿಕೆ ತಲುಪಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT