ತಿಪಟೂರು: ತಾಲ್ಲೂಕಿನ ನೊಣವಿನಕೆರೆಯ ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಧರ್ಮೇಗೌಡನಪಾಳ್ಯದ ರುದ್ರೇಶ್ (39) ಮೃತಪಟ್ಟವರು.
ಗ್ರಾಮದಿಂದ ನೊಣವಿನಕೆರೆಗೆ ಕೆಲಸದ ನಿಮಿತ್ತ ಆಗಮಿಸುತ್ತಿದ್ದಾಗ ಎದುರಿನಿಂದ ಚಿಪ್ಪು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಸವಾರನ ಮೇಲೆ ಹರಿದ ಪರಿಣಾಮ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.