ADVERTISEMENT

ಶುದ್ಧ ನೀರಿನ ಘಟಕ ಉದ್ಘಾಟನೆ

ಕೋವಿಡ್‌– ಎಚ್ಚರಿಕೆ ಅಗತ್ಯ: ಶಾಸಕ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 5:00 IST
Last Updated 21 ಏಪ್ರಿಲ್ 2021, 5:00 IST
ಶಾಸಕ ಡಾ. ಜಿ. ಪರಮೇಶ್ವರ್ ಕೊರಟಗೆರೆ ಮುಖ್ಯರಸ್ತೆಯಲ್ಲಿ ಶುದ್ಧ ಕುಡಿಯುವ ನೀರನ ಘಟಕ, ಉದ್ಯಾನ ಉದ್ಘಾಟಿಸಿದರು
ಶಾಸಕ ಡಾ. ಜಿ. ಪರಮೇಶ್ವರ್ ಕೊರಟಗೆರೆ ಮುಖ್ಯರಸ್ತೆಯಲ್ಲಿ ಶುದ್ಧ ಕುಡಿಯುವ ನೀರನ ಘಟಕ, ಉದ್ಯಾನ ಉದ್ಘಾಟಿಸಿದರು   

ಕೊರಟಗೆರೆ: ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿಯೊಬ್ಬರೂ ವೈಯುಕ್ತಿಕವಾಗಿ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ ಎಂದು ಶಾಸಕ ಡಾ. ಜಿ.ಪರಮೇಶ್ವರ ತಿಳಿಸಿದರು.

ಪಟ್ಟಣದ ನಾಲ್ಕು ವಾರ್ಡ್‌ಗಳಲ್ಲಿ ₹1.34 ಕೋಟಿ ವೆಚ್ಚದ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೋವಿಡ್ ನಿಯಮ ಪಾಲಿಸಲೇಬೇಕು. ಯಾರೂ ನಿರ್ಲಕ್ಷಿಸಬಾರದು ಎಂದರು.

ಸ್ಥಳೀಯ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸಮಸ್ಯೆಗೆ ಸಣ್ಣ ಪರಿಹಾರವಿದ್ದಂತೆ ಎಂದರು.

ADVERTISEMENT

ಎಸ್‌ಟಿಪಿ, ಪಿಎಎಸ್‌ಟಿ ಯೋಜನೆಯಲ್ಲಿ ಹಲವು ಪರಿಶಿಷ್ಟ ಕಾಲೊನಿಗಳಲ್ಲಿ ಹೈ ಮಾಸ್ಟ್‌ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ ಎಂದರು.

ಪಟ್ಟಣ ಸೇರಿದಂತೆ ಕ್ಷೇತ್ರದ 16 ಗ್ರಾಮಗಳಲ್ಲಿ ಹೇಮಾವತಿ ಕುಡಿಯುವ ನೀರಿನ ಯೋಜನೆ ತರಲಾಗಿದೆ. ಆದರೆ ಪಟ್ಟಣ ಸೇರಿದಂತೆ ಗ್ರಾಮಗಳ ಕೆರೆಗಳಿಗೆ ನೀರಿನ ಕೊರತೆ ಕಾಣುತ್ತಿದ್ದು, ಮುಂಬರುವ ದಿನದಲ್ಲಿ ಅದನ್ನು ಸರಿಪಡಿಸಿ ಎಲ್ಲ ಕೆರೆಗಳಿಗೂ ಸಾಕಷ್ಟು ನೀರು ಹರಿಸುವ ಪ್ರಯತ್ನಿಸಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಭಾರತಿ, ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಆರೋಗ್ಯ ನಿರೀಕ್ಷಕ ರೈಸ್ ಅಹಮದ್ ಸದಸ್ಯರಾದ ಎ.ಡಿ. ಬಲರಾಮಯ್ಯ, ಕೆ.ಆರ್.ಓಬಳರಾಜು, ಕೆ.ಎನ್ ಲಕ್ಷ್ಮಿನಾರಾಯಣ್, ಪ್ರದೀಪ್ ಕುಮಾರ್, ಪುಟ್ಟನರಸಯ್ಯ, ಕೆ.ಎನ್. ನಟರಾಜು, ನಾಗರಾಜು, ನಂದೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಯುವ ಅಧ್ಯಕ್ಷ ವಿನಯ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮುಖಂಡರಾದ ಗಣೇಶ್, ರಮೇಶ್, ತುಂಗಾ ಮಂಜುನಾಥ್, ಕಲೀಂ ಉಲ್ಲಾ, ಕೆ.ವಿ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.