ADVERTISEMENT

ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 2:48 IST
Last Updated 1 ಜೂನ್ 2021, 2:48 IST

ಮಧುಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ವೀರಣ್ಣನಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಪುಟ್ಟಲಿಂಗಣ್ಣ (45) ಮೃತಪಟ್ಟವರು.

ಕೆರೆಯಲ್ಲಿ ಮೀನು ಹಿಡಿಯಲು ಬಲೆ ಸಮೇತ ಪುಟ್ಟಲಿಂಗಣ್ಣ, ಕೆಂಚಣ್ಣ ಹಾಗೂ ರಂಗನಾಥ ತೆರಳಿದ್ದಾರೆ. ಕೆರೆಯಲ್ಲಿ ‌ಮೀನಿನ‌ ಬಲೆ ಬಿಟ್ಟು, ಪುನಃ ಬಲೆ ತೆಗೆಯಲು ಹೋದಾಗ ಪುಟ್ಟಲಿಂಗಣ್ಣ ಕಾಲಿಗೆ ಬಲೆ ಸಿಲುಕಿಕೊಂಡು ನೀರಿನಲ್ಲಿ ಮುಳುಗಿದ್ದಾರೆ. ಈ ವಿಷಯವನ್ನು ಪತ್ನಿ ರಾಮಕ್ಕ ಅವರಿಗೆ ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹವನ್ನು ಪತ್ತೆ
ಹಚ್ಚಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.