ADVERTISEMENT

ದೇವಸ್ಥಾನದ ಹುಂಡಿ ಕಳವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 4:42 IST
Last Updated 26 ಏಪ್ರಿಲ್ 2022, 4:42 IST

ಶಿರಾ: ನಗರದ ಗ್ರಾಮ ದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಬಾಗಿಲ ಬೀಗ ಒಡೆದು ಹುಂಡಿ ಕಳವು ಮಾಡಲಾಗಿದೆ.

ನಗರದ ಹೃದಯ ಭಾಗದಲ್ಲಿ ದುರ್ಗಮ್ಮ ದೇವಸ್ಥಾನವಿದ್ದು, ಇಲ್ಲಿ ಕಳ್ಳತನವಾಗಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ. ದೇಗುಲದ ಬೀಗಒಡೆದು ಒಳನುಗ್ಗಿರುವ ಕಳ್ಳರು ಹುಂಡಿಯನ್ನು ಎತ್ತಿಕೊಂಡು ಹೋಗಿ ಸಮೀಪದ ಟೀ ಅಂಗಡಿ ಬಳಿ ಹಣ ತೆಗೆದುಕೊಂಡು ಹುಂಡಿಯನ್ನು ಎಸೆದು ಹೋಗಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.