ADVERTISEMENT

ಶಿರಾ: ಪ್ರತ್ಯೇಕ ಅಪಘಾತದಲ್ಲಿ ಮೂವರ ಸಾವು 

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 6:17 IST
Last Updated 27 ನವೆಂಬರ್ 2022, 6:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿರಾ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ.

ನಗರದ ಮಾಗೋಡು ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಕೊಂಡಮ್ಮನಹಳ್ಳಿ ಗ್ರಾಮದ ರಾಕೇಶ್ (23), ಮತ್ತೊಂದು ಬೈಕ್ ನಲ್ಲಿದ್ದ ಗುಳಿಗೇನಹಳ್ಳಿ ಗ್ರಾಮದ ನಾಗರಾಜು (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಗುಳಿಗೇನಹಳ್ಳಿ ಗ್ರಾಮದ ಪೃಥ್ವಿರಂಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸಾವು
ಶಿರಾ ತಾಲ್ಲೂಕಿನ ಬಾಲೇನಹಳ್ಳಿ ಗೇಟ್ ಹತ್ತಿರ ಅಪರಿಚಿತ ವಾಹನ ಡಿಕ್ಕಿಯಾಗಿ ಮಾಯಮ್ಮ (35) ಮೃತಪಟ್ಟಿದ್ದಾರೆ.

ಬೆಂಗಳೂರಿನ ಬಿಬಿಎಂಪಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಹಾಳೆಕೊಪ್ಪ ಗ್ರಾಮ ಮಾಯಮ್ಮ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ -48 ರ ಬಾಲೇನಹಳ್ಳಿ ಗೇಟ್ ಬಳಿ ಪ್ರಯಾಣಿಕರು ಮೂತ್ರ ವಿಸರ್ಜನೆಗಾಗಿ ನಿಲ್ಲಿಸಿದ್ದ ಸಮಯದಲ್ಲಿ ಬಸ್ ನಿಂದ ಇಳಿದು ರಸ್ತೆ ದಾಟುವಾಗ ವೇಗವಾಗಿ ಬಂದ ವಾಹನ ಮಾಯಮ್ಮಗೆ ಡಿಕ್ಕಿ ಹೊಡೆದಿದೆ. ಅಪಘಾತ ಮಾಡಿದ ಚಾಲಕ ವಾಹನವನ್ನು ನಿಲ್ಲಿಸದೆ ಹೋಗಿದ್ದಾನೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.