ADVERTISEMENT

ಕುಣಿಗಲ್ ತಾಲೂಕಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 5 ಮೇ 2022, 14:04 IST
Last Updated 5 ಮೇ 2022, 14:04 IST
   

ತುಮಕೂರು: ಕುಣಿಗಲ್‌ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಬೂದನಹಳ್ಳಿ ಗ್ರಾಮದ ಬಳಿ ಸಿಡಿಲು ಬಡಿದು ಲಕ್ಕಮ್ಮ (65) ಎಂಬುವರು ಗುರುವಾರ ಸಂಜೆ ಮೃತ ಪಟ್ಟಿದ್ದಾರೆ.

ದನ ಮೇಯಿಸಲು ಹೋಗಿದ್ದ ಲಕ್ಕಮ್ಮ, ಮಳೆ ಬಂದ ಕಾರಣ ಹುಣಿಸೆಮರದ ಕೆಳಗೆ ಆಶ್ರಯ ಪಡೆದಿದ್ದರು. ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಲಿಯೂರುದುರ್ಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಕಮ್ಮಗೆ ಮಗಳು, ಮೊಮ್ಮಗಳು ಇದ್ದಾರೆ.

ಶಾಸಕ ರಂಗನಾಥ್, ತಹಶೀಲ್ದಾರ್ ಮಹಾಬಲೇಶ್ವರ ಮೃತ ಲಕ್ಕಮ್ಮ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.