ADVERTISEMENT

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ತಿಪಟೂರು ಬಂದ್: ಸಂಪೂರ್ಣ ಬೆಂಬಲ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 6:05 IST
Last Updated 29 ಜುಲೈ 2022, 6:05 IST
   

ತಿಪಟೂರು: ನಿರಂತರವಾಗಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ, ಬಜರಂಗದಳದ ವತಿಯಿಂದ ಶುಕ್ರವಾರ ತಿಪಟೂರು ನಗರ ಬಂದ್‍ಗೆ ಕರೆ ನೀಡಿದ್ದು, ನಗರದಲ್ಲಿ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದಾದ್ಯಂತ ಬಂದ್ ಅಂಗವಾಗಿ ಅಂಗಡಿ ಮಾಲೀಕರು, ಸಾರ್ವಜನಿಕರಿಗೆ ಸಂಘಟನೆ ವತಿಯಿಂದ ಕರಪತ್ರಗಳನ್ನು ಹಂಚುವ ಮೂಲಕ ಮಾಹಿತಿ ನೀಡಿದ್ದರು.

ನಗರದ ಶಾಲಾ, ಕಾಲೇಜುಗಳಿಗೆ ಮುನ್ನೆಚ್ಚರಿಕೆಯಾಗಿ ರಜೆ ಘೋಷಿಸಲಾಗಿದೆ. ವಾಹನ ಸಂಚಾರ ವಿರಳವಾಗಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.