ADVERTISEMENT

ಎಡೆಯೂರು ಕ್ಷೇತ್ರದ ಆನೆ ಪುನರ್ವಸತಿ ಕೇಂದ್ರಕ್ಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 16:11 IST
Last Updated 14 ಮಾರ್ಚ್ 2024, 16:11 IST
ಕುಣಿಗಲ್ ಎಡೆಯೂರು ಕ್ಷೇತ್ರದ ಆನೆ ಗಂಗಾ ಳನ್ನು ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಯಿತು
ಕುಣಿಗಲ್ ಎಡೆಯೂರು ಕ್ಷೇತ್ರದ ಆನೆ ಗಂಗಾ ಳನ್ನು ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಯಿತು   

ಕುಣಿಗಲ್: ತಾಲ್ಲೂಕಿನ ಎಡೆಯೂರು ಸಿದ್ದಲಿಂಗೇಶ್ವರ ಕ್ಷೇತ್ರದ ಆನೆ ಗಂಗಾ, ವಯೋಸಹಜವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದು, ತಜ್ಞ ವೈದ್ಯರ ಸಲಹೆ ಮೇರೆಗೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬಳಿಯ ಆನೆ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ.

70 ವರ್ಷದ ಆನೆ ಗಂಗಾ ಕಾಲಿಗೆ ಸೋಂಕು ತಗುಲಿ ಪರದಾಡುತ್ತಿದ್ದು, ಭಕ್ತರು ಈ ಬಗ್ಗೆ ಮನವಿ ಮಾಡಿದ್ದರು. ಕ್ಯೂಪಾ ಸಂಸ್ಥೆಯ ತಜ್ಞ ವೈದ್ಯರ ತಂಡ ಚಿಕಿತ್ಸೆಗಾಗಿ ಸೂಚನೆ ನೀಡಿದ ಮೇರೆಗೆ, ಮತ್ತು ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಕ್ಷೇತ್ರಕ್ಕೆ 1996ರಲ್ಲಿ ಗದಗಿನ ಡಂಬಳ ಮಠದವರು ಆನೆಯನ್ನು ಕೊಡುಗೆಯಾಗಿ ನೀಡಿದ್ದು, ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ದೇವಾಲಯದ ಪರವಾಗಿ ಸ್ವೀಕರಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.