ತುಮಕೂರು: ತಿಪಟೂರು ತಾಲ್ಲೂಕು ಎಚ್.ಮುದ್ದೇನಹಳ್ಳಿ ತಾಂಡಾದ ರೈತ ಸುರೇಶ್ ನಾಯ್ಕ ಎಂಬುವವರ ಮೇಲೆ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.
ಸುರೇಶ್ ಕೊಟ್ಟಿಗೆಯಲ್ಲಿ ಮಲಗಿದ್ದು ಅಲ್ಲಿ ಎರಡು ಹಸುಗಳು ಇದ್ದವು. ಸುರೇಶ್ ಅವರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಸುರೇಶ್ ಅವರ ಬಾಯಿ, ಕುತ್ತಿಗೆ ಮತ್ತು ಬೆನ್ನಿಗೆ ಚಿರತೆ ಪರಚಿದೆ. ಆಗ ಅವರು ಚಿರತೆಯನ್ನು ಜೋರಾಗಿ ತಳ್ಳಿದ್ದು ಅದು ಪರಾರಿಯಾಗಿದೆ.
ಈ ಭಾಗದಲ್ಲಿ ಆಗಾಗ್ಗೆ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು ಜನರು ಗಾಬರಿಗೊಂಡಿದ್ದಾರೆ. ಚಿರತೆಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.