ADVERTISEMENT

ತುಮಕೂರು: ಸಾರಿಗೆ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 7:53 IST
Last Updated 24 ಜನವರಿ 2023, 7:53 IST
   

ತುಮಕೂರು: ವೇತನ ಹೆಚ್ಚಳ, ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಸಂಘಟನೆ ಪ್ರಮುಖರು ನಗರದ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿಯ ಮುಂಭಾಗ ಮಂಗಳವಾರ ಧರಣಿ ನಡೆಸಿದರು.

ಕೆಎಸ್‌ಆರ್‌ಟಿಸಿ ಸ್ಟಾಫ್‌, ವರ್ಕರ್ಸ್‌ ಫೆಡರೇಷನ್‌ (ಎಐಟಿಯುಸಿ), ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‌ (ಸಿಐಟಿಯು), ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾ ಮಂಡಳದ ಪದಾಧಿಕಾರಿಗಳು, ಕಾರ್ಮಿಕರು ಧರಣಿ ನಡೆಸಿದರು.

ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಸಾಂಕೇತಿಕವಾಗಿ ಧರಣಿ ಕೈಗೊಂಡಿದ್ದೇವೆ. ಸರ್ಕಾರ ಕೂಡಲೇ ಸ್ಪಂದಿಸಿ, ಬೇಡಿಕೆ ಈಡೇರಿಸಬೇಕು. ನೌಕರರ ಕುರಿತು ನಿರ್ಲಕ್ಷ್ಯ ಭಾವನೆ ತೋರಬಾರದು ಎಂದು ಧರಣಿ ನಿರತರು ಒತ್ತಾಯಿಸಿದರು.

ADVERTISEMENT

ಎಂದಿನಂತೆ ಬಸ್‌ ಸಂಚಾರ: ಜಿಲ್ಲೆಯಲ್ಲಿ ಬಸ್‌ಗಳು ಎಂದಿನಂತೆ ಸಂಚರಿಸಿದವು. ನಗರದಿಂದ ಇತರೆಡೆಗೆ ತೆರಳುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಮಾತ್ರ ಧರಣಿಯಲ್ಲಿ ಭಾಗವಹಿಸಿದ್ದರು.

ವರ್ಕರ್ಸ್‌ ಫೆಡರೇಷನ್‌ನ ಅಧ್ಯಕ್ಷ ಅಕ್ತರ್‌ ಪಾಷಾ, ಕಾರ್ಯದರ್ಶಿ ಅನಂತ್‌, ನೌಕರರ ಫೆಡರೇಷನ್‌ನ ಅಧ್ಯಕ್ಷ ಎ.ಆರ್‌.ದೇವರಾಜ್‌, ಕಾರ್ಯದರ್ಶಿ ಶಮೀವುಲ್ಲಾ, ಮಹಾ ಮಂಡಳದ ಅಧ್ಯಕ್ಷ ಬಸವರಾಜ್‌, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್‌ ಮುಜೀಬ್‌, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.