ತುರುವೇಕೆರೆ: ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿ ಶನಿವಾರ ಕೆಎಸ್ಆರ್ಟಿಸಿ ಬಸ್ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತೀರ್ಥಪುರ ನಿವಾಸಿ ನಳಿನ (43) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನಳಿನ ಮನೆಯಿಂದ ಲೋಕಮ್ಮನಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬರುವಾಗ ಅಪಘಾತ ನಡೆದಿದೆ.
ಸಚಿವ ಭೇಟಿ: ಸಚಿವ ಜಿ. ಪರಮೇಶ್ವರ ಚುನಾವಣಾ ಪ್ರಚಾರ ಸಭೆ ಮುಗಿಸಿ ತುಮಕೂರಿಗೆ ತೆರಳುತ್ತಿದ್ದಾಗ ಲೋಕಮ್ಮನಹಳ್ಳಿ ಗೇಟ್ ಸಮೀಪ ರಸ್ತೆ ಬದಿ ಜನರು ನಿಂತಿರುವುದನ್ನು ಗಮನಿಸಿದ್ದಾರೆ. ಅಪಘಾತ ನಡೆದಿರುವುದು ತಿಳಿದು ತುರುವೇಕೆರೆ ಪೊಲೀಸ್ ಇನ್ಸ್ಪೆಕ್ಟರ್ ಲೋಹಿತ್ ಅವರನ್ನು ಸ್ಥಳಕ್ಕೆ ಕರೆಸಿ, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.