ADVERTISEMENT

ತುಮಕೂರು: ರಸ್ತೆಗೆ ಬಿದ್ದ ಮರ, ಜನರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 7:19 IST
Last Updated 20 ಏಪ್ರಿಲ್ 2022, 7:19 IST
   

ತುಮಕೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು-ಮೈಸೂರು ರಸ್ತೆಯ ಬೆಲವತ್ತ ಗ್ರಾಮದ ಬಳಿ ಮಂಗಳವಾರ ರಾತ್ರಿ ರಸ್ತೆಗೆ ಅಡ್ಡವಾಗಿ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಲೋಕೋಪಯೋಗಿ ಇಲಾಖೆಯವರು ರಸ್ತೆ ಪಕ್ಕದಲ್ಲಿ ಆಳವಾದ ಗುಂಡಿ ತೆಗೆದಿರುವುದರಿಂದ ಮರಗಳು ಬಿದ್ದಿದೆ ಎಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಬೆಳಿಗ್ಗೆ ಪ್ರತಿಭಟನೆ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಆಗಿರುವ ತಪ್ಪನ್ನು ಸರಿಪಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.