ADVERTISEMENT

ತುಮಕೂರು: ಚಲಿಸುತ್ತಿದ್ದ ಕಾರ್‌ ಬೆಂಕಿಗಾಹುತಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 8:26 IST
Last Updated 14 ಫೆಬ್ರುವರಿ 2022, 8:26 IST
   

ತುಮಕೂರು: ಚಲಿಸುತ್ತಿದ್ದ ಹೊಸ ಟಾಟಾ ಪಂಚ್‌ ಕಾರ್‌ನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಸೋಮವಾರ ನಡೆದಿದೆ.

ನಗರದ ಗುಬ್ಬಿ ಗೇಟ್‌ ಬಳಿ ಘಟನೆ ನಡೆದಿದೆ. ತುಮಕೂರಿನಿಂದ ಗುಬ್ಬಿಗೆ ತೆರಳುತ್ತಿರುವ ಸಮಯದಲ್ಲಿ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಕಾರ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯ ಕುರಿತು ತಿಲಕ್‌ಪಾರ್ಕ್‌ ಠಾಣೆಯಲ್ಲಿ ‍ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT