ತುಮಕೂರು: ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸಮೀಪದ ಕುರಂಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜುಂಜರಾಮನಹಳ್ಳಿ ಗ್ರಾಮದ ಜನರು ಎಂ ಸ್ಯಾಂಡ್ ಸರಬರಾಜು ಲಾರಿಗಳನ್ನು ಸೋಮವಾರ ಬೆಳಿಗ್ಗೆಯಿಂದ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ನಿಗದಿಪಡಿಸಿದಕ್ಕಿಂತ ನಿಗದಿಗಿಂತ ಹೆಚ್ಚಿನ ಮರಳು ಸಾಗಣೆ ತಡೆಯಬೇಕು, ಅತಿ ವೇಗದ ಸಂಚಾರ ನಿಯಂತ್ರಿಸಬೇಕು, ಹಾಳಾಗಿರುವ ರಸ್ತೆಯನ್ನು ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿಗಳನ್ನು ತಡೆದಿದ್ದಾರೆ.
ಈವರೆಗೂ ಯಾವ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.