ADVERTISEMENT

ಹುಳಿಯಾರು | ಕೆಸರು ಗದ್ದೆಯಾದ ರಸ್ತೆ: ಜನ ಸಂಚಾರ ಅಸ್ತವ್ಯಸ್ತ

ಸಂಚಾರ

​ಪ್ರಜಾವಾಣಿ ವಾರ್ತೆ
Published 27 ಜುಲೈ 2023, 13:28 IST
Last Updated 27 ಜುಲೈ 2023, 13:28 IST
ಗಾಣದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಪಾಳ್ಯ ಹಾಗೂ ಗೇಮಾನಯ್ಕನತಾಂಡಾ ಗ್ರಾಮಗಳಿಗೆ ಹೋಗುವ ರಸ್ತೆ ಕಳೆದೆರಡು ದಿನಗಳ ಮಳೆಗೆ ಕೆಸರು ಗದ್ದೆಯಾಗಿ ಮಾರ್ಪಟ್ಟಿರುವುದು
ಗಾಣದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಪಾಳ್ಯ ಹಾಗೂ ಗೇಮಾನಯ್ಕನತಾಂಡಾ ಗ್ರಾಮಗಳಿಗೆ ಹೋಗುವ ರಸ್ತೆ ಕಳೆದೆರಡು ದಿನಗಳ ಮಳೆಗೆ ಕೆಸರು ಗದ್ದೆಯಾಗಿ ಮಾರ್ಪಟ್ಟಿರುವುದು    

ಹುಳಿಯಾರು: ಗಾಣದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಪಾಳ್ಯ ಹಾಗೂ ಗೇಮಾನಾಯ್ಕನತಾಂಡಾ ಗ್ರಾಮಗಳಿಗೆ ಹೋಗುವ ರಸ್ತೆ ಕಳೆದೆರಡು ದಿನಗಳ ಮಳೆಗೆ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇದರಿಂದ ಜನಸಂಚಾರಕ್ಕೆ ತೊಂದರೆಯಾಗಿದೆ. 

ರಸ್ತೆಗೆ ಮಣ್ಣು ಹಾಕಿರುವುದರಿಂದ ಜನರು ನಡೆದು ಹೋಗುವುದೇ ದುಸ್ತರವಾಗಿದೆ ಎಂದು ಭದ್ರಯ್ಯನಪಾಳ್ಯದ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಇತ್ತ ಗಮನಹರಿಸಿ ಕಾಮಗಾರಿ ಮತ್ತೆ ಆರಂಭಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT