ತುಮಕೂರು:ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ವಿಜಯಲಕ್ಷ್ಮಿ ಖಾಸಗಿ ಬಸ್ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಅಪಘಾತಕ್ಕೀಡಾಗಿದ್ದು, 5ಮಂದಿಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನುಗೆರಹಳ್ಳಿಯ ಇಮ್ರಾನ್(20),ಹೊಳವಹಳ್ಳಿಯಅಕ್ರಮ್ ಪಾಷ (28),ಪುಲಮಾಚಿಯಶಿವಕುಮಾರ್(27), ಕೊರಟಗೆರೆಯ ಸಾದತ್(18), ಕೊಡಿಗೆಹಳ್ಳಿಯ ಶ್ರೀನಿವಾಸ್(40) ಎಂದು ಗುರುತಿಸಲಾಗಿದೆ.
10ಕ್ಕೂ ಹೆಚ್ಚು ಜನರುಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಬಸ್ ಅಡಿಯಲ್ಲಿ ಇನ್ನಷ್ಟು ಜನರು ಸಿಲುಕಿದ್ದಾರೆ.
ಬಸ್ ತೆರವು ಕಾರ್ಯಾಚರಣೆ ಮುಂದುವರೆದಿದ್ದು,ಘಟನಾ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.