ADVERTISEMENT

ತುಮಕೂರು: ಕಾರ್ಖಾನೆ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2025, 11:40 IST
Last Updated 21 ಮೇ 2025, 11:40 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ತುಮಕೂರು: ನಗರ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಮಧುಗಿರಿ ತಾಲ್ಲೂಕಿನ ಮಾಗೋಡು ಗ್ರಾಮದ ಪ್ರತಾಪ್‌ (23), ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್‌ (32) ಮೃತರು. ತರೂರಿನ ಮಂಜಣ್ಣ (42), ಯುವರಾಜ್‌ (32) ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ADVERTISEMENT

ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್‌ ಬಯೋ’ ಎಂಬ ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ರಾಸಾಯನಿಕ ಸಂಗ್ರಹಿಸುವ ಸಂಪ್‌ ಸ್ವಚ್ಛತೆಗಾಗಿ ನಾಲ್ವರು ಸಂಪ್‌ ಒಳಗೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.