ADVERTISEMENT

ತುಮಕೂರು: ಕಂಗನಾ ವಿರುದ್ಧ ಎಫ್ಐಆರ್‌ಗೆ ನ್ಯಾಯಾಲಯ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 12:23 IST
Last Updated 9 ಅಕ್ಟೋಬರ್ 2020, 12:23 IST
ಕಂಗನಾ ರನೌತ್
ಕಂಗನಾ ರನೌತ್   

ತುಮಕೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರನೌತ್ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಂಗನಾ ವಿರುದ್ಧ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್‌.ರಮೇಶ್ ನಾಯಕ್ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.

ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.