ADVERTISEMENT

ತುಮಕೂರು ವಿವಿಯಿಂದ ಆಹಾರ ಸಾಮಗ್ರಿ ವಿತರಣೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 13:36 IST
Last Updated 24 ಏಪ್ರಿಲ್ 2020, 13:36 IST
ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಆಹಾರದ ಕಿಟ್‍ಗಳನ್ನು ವಿತರಿಸಿದರು
ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಆಹಾರದ ಕಿಟ್‍ಗಳನ್ನು ವಿತರಿಸಿದರು   

ತುಮಕೂರು: ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾಗಿರುವ ಅಶಕ್ತರಿಗೆ ತುಮಕೂರು ವಿಶ್ವವಿದ್ಯಾಲಯದಿಂದ ಶುಕ್ರವಾರ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ವಿ.ವಿ ಮುಖ್ಯದ್ವಾರದ ಎದುರು ಆಹಾರದ ಕಿಟ್‍ಗಳನ್ನು ಸಾಂಕೇತಿಕವಾಗಿ ವಿತರಿಸಿದರು.

ಸ್ನಾತಕೋತ್ತರ ವಿಭಾಗಗಳ ಹಾಗೂ ಘಟಕ ಕಾಲೇಜುಗಳ ಉಪನ್ಯಾಸಕರ ದೇಣಿಗೆಯಾಗಿ ಈ ಕಾರ್ಯ ಕೈಗೊಳ್ಳಲಾಗಿದೆ. ಅವಶ್ಯಕತೆ ಉಳ್ಳವರಿಗೆ ಸಾಮಗ್ರಿ ನೀಡಲಾಗುತ್ತಿದೆ ಎಂದು ಕುಲಪತಿ ತಿಳಿಸಿದರು.

ADVERTISEMENT

ಬಳಿಕ ವಿವಿ ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಬಿ.ಎಚ್.ಪಾಳ್ಯ ಸಮೀಪದ ಕಾಲೊನಿಗೆ ತೆರಳಿ ಆಹಾರ ಸಾಮಗ್ರಿಗಳನ್ನು ವಿತರಿಸಿದರು.

ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.