
ಪ್ರಜಾವಾಣಿ ವಾರ್ತೆ
ಬಂಧನ
ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮುತ್ತಗದಹಳ್ಳಿ ನಿವಾಸಿ ಅಶ್ವತ್ ಕುಮಾರ್ ಪತ್ನಿ, ಮಕ್ಕಳ ಮೇಲೆ ನಿರಂತರ ಹಲ್ಲೆ ನಡೆಸುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಶ್ವತ್ ಕುಮಾರ್ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ತೆಗೆದು ಪತ್ನಿ ಮಗ, ಮಗಳ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದ. ಈಚೆಗೆ ಬಾಣಂತನಕ್ಕೆ ಬಂದಿದ್ದ ಮಗಳ ಮೇಲೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಮಮತ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಡಿ 31ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.