ತುಮಕೂರು: ‘ನಿಗಮ, ಮಂಡಳಿಯ ಅಧ್ಯಕ್ಷ ಸ್ಥಾನ ಕೊಡದಿದ್ದರೆ ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ತುರುವೇಕೆರೆ ಬಿಜೆಪಿ ಶಾಸಕ ಮಸಾಲ ಜಯರಾಮ್ ಬೆದರಿಕೆ ಹಾಕಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡುತ್ತಿದೆ ಎಂದು ಅನಿಸುತ್ತಿದೆ. ಈವರೆಗೂ ಹೇಳಿದ್ದನ್ನು ಕೇಳಿಕೊಂಡು ಬಂದಿದ್ದೇನೆ. ಬೇಸರವಾಗಿರುವ ವಿಚಾರವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಮುಖ್ಯಮಂತ್ರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.
‘ಸಚಿವ ಸ್ಥಾನ ಕೇಳುತ್ತಿಲ್ಲ. ಒಂದು ಒಳ್ಳೆಯ ನಿಗಮ, ಮಂಡಳಿ ಸ್ಥಾನ ಕೊಡಿ ಎಂದು ಕೇಳಿಕೊಂಡಿದ್ದೇನೆ. ಅದಕ್ಕೂ ಸ್ಪಂದಿಸುತ್ತಿಲ್ಲ. ಇದೇ ರೀತಿ ನಿರ್ಲಕ್ಷ್ಯ ಮುಂದುವರಿದರೆ ನವೆಂಬರ್ನಲ್ಲಿ ಒಂದು ನಿರ್ಧಾರ ಕೈಗೊಳ್ಳಲಾಗುವುದು. ನನ್ನ ತಾಳ್ಮೆಗೂ ಒಂದು ಮಿತಿ ಇದೆ’ ಎಂದು ಗುಡುಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.