ADVERTISEMENT

ನೀರಿನಲ್ಲಿ ಮುಳುಗಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 7:43 IST
Last Updated 28 ನವೆಂಬರ್ 2022, 7:43 IST
   

ಕೊರಟಗೆರೆ: ಕೆರೆ ನೀರು ನೋಡಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತುಂಬಾಡಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಕೃಷ್ಣಪ್ಪ (45), ನಿತಿನ್ (9) ಮೃತಪಟ್ಟವರು. ಕೆರೆ ನೋಡಲು ಹೋಗಿದ್ದ ವೇಳೆ ಘಟನೆ ಆಕಸ್ಮಿಕವಾಗಿ ನಡೆದಿದೆ. ನಿತಿನ್ ನೀರಿನಲ್ಲಿ ಮುಳುಗುತ್ತಿದ್ದ ಸಮಯದಲ್ಲಿ ರಕ್ಷಣೆಗೆ ಮುಂದಾದ ಕೃಷ್ಣಪ್ಪ ಸಹ ನೀರಿನ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT