ADVERTISEMENT

ಕೃಷಿ ಮಂಥನ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತ

​ಪ್ರಜಾವಾಣಿ ವಾರ್ತೆ
Published 12 ಮೇ 2019, 20:19 IST
Last Updated 12 ಮೇ 2019, 20:19 IST
ಕಾರ್ಯಕ್ರಮದಲ್ಲಿ ಸ್ವಾಮಿ ಧೀರಾನಂದ ಅವರನ್ನು ಸತ್ಕರಿಸಲಾಯಿತು
ಕಾರ್ಯಕ್ರಮದಲ್ಲಿ ಸ್ವಾಮಿ ಧೀರಾನಂದ ಅವರನ್ನು ಸತ್ಕರಿಸಲಾಯಿತು   

ತುಮಕೂರು: ‘ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತ ಮತ್ತು ರಚನಾತ್ಮಕವಾದ ಕೃಷಿ ಮಂಥನ ಉಚಿತ ತರಬೇತಿ ಶಿಬಿರ ಆಯೋಜಿಸಿರುವುದು ಉಪಯುಕ್ತವಾದುದು’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಧೀರಾನಂದ ನುಡಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಉದ್ಘಾಟಿಸಿ ಮಾತನಾಡಿದರು.

‘ಇಂತಹ ಶಿಬಿರಗಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬರು ಬದುಕಿನಲ್ಲಿ ಸಕಾರಾತ್ಮಕ ಗುಣ ಅಳವಡಿಸಿಕೊಳ್ಳಬೇಕು. ವಿವೇಕಾನಂದರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು. ಭಗತ್‌ಸಿಂಗ್ ಅವರ ಆದರ್ಶನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ನುಡಿದರು.

ADVERTISEMENT

ಎಬಿವಿಪಿ ಜಿಲ್ಲಾ ಪ್ರಮುಖರಾದ ಪ್ರೊ. ರವೀಂದ್ರ, ಕಾರ್ಯಕರ್ತರಾದ ರಾಧಾಕೃಷ್ಣ, ಅಪ್ಪು ಪಾಟೀಲ್, ವೀರೇಶ್, ವಿ. ನಾಗೇಂದ್ರ ಹಾಗೂ ೭೦ಕ್ಕೂ ಅಧಿಕ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.