ADVERTISEMENT

ಮಹಾಕಾವ್ಯಗಳೇ ಬದುಕಿಗೆ ದಾರಿದೀಪ: ಶಾಸಕ ಬಿ.ಸಿ. ನಾಗೇಶ್

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 2:33 IST
Last Updated 3 ನವೆಂಬರ್ 2020, 2:33 IST
ತಿಪಟೂರಿನಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಶಾಸಕ ಬಿ.ಸಿ.ನಾಗೇಶ್ ಪುಷ್ಪಾರ್ಚನೆ ಮಾಡಿದರು
ತಿಪಟೂರಿನಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಶಾಸಕ ಬಿ.ಸಿ.ನಾಗೇಶ್ ಪುಷ್ಪಾರ್ಚನೆ ಮಾಡಿದರು   

ತಿಪಟೂರು: ಭಾರತೀಯರ ಆದರ್ಶ ಜೀವನಕ್ಕೆ ರಾಮಾಯಣ, ಮಹಾಭಾರದಂತಹ ಕಾವ್ಯಗಳೇ ಆಧಾರ. ಅಂತಹ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿಯ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಬಿ.ಸಿ. ನಾಗೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಸಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿದರು.

ಪುರಾತನ ಕಾಲದಿಂದಲೂ ರಾಮಯಣ, ಮಹಾಭಾರತ ಕಾವ್ಯ ಭಾರತೀಯ ಆದರ್ಶಯುತ ಬದುಕಿನ ದಾರಿ ದೀಪಗಳಾಗಿವೆ. ಅಲ್ಲಿನ ಪ್ರತಿಯೊಂದು ಸನ್ನಿವೇಶಗಳನ್ನು ಅರಿತು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಿರ್ವಹಣೆ ಸಾಧ್ಯ ಎಂದು ಸಲಹೆ ನೀಡಿದರು.

ADVERTISEMENT

ಪ್ರತಿಯೊಬ್ಬರ ಮನೆಯಲ್ಲಿ ರಾಮನ ಆದರ್ಶಗಳನ್ನು ಮಕ್ಕಳಿಗೆ ಪಠಣೆ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ತಹಶೀಲ್ದಾರ್ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ಡಿವೈಎಸ್‍ಪಿ ಚಂದನ್ ಕುಮಾರ್, ಮುಖಂಡರಾದ ನಗರಸಭಾ ಸದಸ್ಯ ಮಹೇಶ್, ಜಯಸಿಂಹ, ದೊಡ್ಡಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.