ADVERTISEMENT

ಮತದಾರರ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 3:50 IST
Last Updated 23 ಡಿಸೆಂಬರ್ 2020, 3:50 IST

ಚಿಕ್ಕನಾಯಕನಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ಅರಿತು ಮತ ಚಲಾಯಿಸಿ, ಯೋಗ್ಯ ಅಭ್ಯರ್ಥಿ ಆಯ್ಕೆಯಿಂದ ಸಂವಿಧಾನದ ಆಶಯ ಈಡೇರಿಸಬಹುದು ಎಂದು ಪ್ರಾಂಶುಪಾಲ ಎಚ್.ಎಸ್.ಶಿವಯೋಗಿ ಹೇಳಿದರು.

ಪಟ್ಟಣದ ನವೋದಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಲ್ಲೂಕು ಸಾಕ್ಷರತಾ ಸಮಿತಿಯ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.

ವಿಭಾಗದ ಮುಖ್ಯಸ್ಥ ಪ್ರೊ.ಸದಾನಂದ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಮತ್ತು ಅದರ ಮಹತ್ವ ಕುರಿತು ಉಪನ್ಯಾಸ ನೀಡಿದರು.

ADVERTISEMENT

ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಉಪನ್ಯಾಸ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಎಸ್. ಪ್ರಕಾಶ, ಕನ್ನಡ ವಿಭಾಗದ ಡಾ.ಸಿ.ಕೆ.ಶೇಖರ್ ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ಮತದಾನ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.